ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪು ವಿರೋಧಿಸಿ ರಾಜ್ಯ ಬಂದ್'ಗೆ ಕರೆ, ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

 ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನೀಡಿದ್ದ ತೀರ್ಪು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್‌ ಕರೆಗೆ ದಕ್ಷಿಣ ಕನ್ನಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.


ಮಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನೀಡಿದ್ದ ತೀರ್ಪು ವಿರೋಧಿಸಿ ವಿವಿಧ ಮುಸ್ಲಿಂ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್‌ ಕರೆಗೆ ದಕ್ಷಿಣ ಕನ್ನಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಂಗಳೂರಿನ ಬಂದರ್‌, ಸೆಂಟ್ರಲ್‌ ಮಾರ್ಕೆಟ್‌, ಸ್ಟೇಟ್‌ ಬ್ಯಾಂಕ್‌, ಎಪಿಎಂಸಿ ಮಾರುಕಟ್ಟೆ ಮತ್ತಿತರ ವ್ಯಾಪಾರ ಪ್ರದೇಶಗಳ ಮೀನುಗಾರಿಕಾ ಬಂದರುಗಳು ಜನರಿಲ್ಲದೆ ಬಿಕೋ ಎನ್ನುತ್ತಿರುವುದು ಕಂಡು ಬಂದಿದೆ. ಈ ಪ್ರದೇಶಗಳಲ್ಲಿ ಮೀನು, ತರಕಾರಿಗಳು ಮತ್ತು ಇತರ ವ್ಯಾಪಾರದೊಂದಿಗೆ ಪ್ರತೀನಿತ್ಯ ಭಾರೀ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು.

ಮಂಗಳೂರಿನಲ್ಲಿ ಮೀನು ಮತ್ತು ತರಕಾರಿ ವ್ಯಾಪಾರದಲ್ಲಿ ತೊಡಗಿರುವವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದು, ಬಂದ್‌ಗೆ ಬೆಂಬಲ ನೀಡಲು ವ್ಯಾಪಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಪ್ರತೀನಿತ್ಯ ಮೀನು ಮತ್ತು ತರಕಾರಿಗಳನ್ನು ಖರೀದಿ ಮಾಡಲು ಬರುತ್ತಿದ್ದ ಜನರ ಮೇಲೆ ಬಂದ್ ಬಿಸಿ ತಟ್ಟಿದೆ.

ಮಂಗಳೂರು ಮತ್ತು ದಕ್ಷಿಣ ಕನ್ನಡದ ಇತರ ಭಾಗಗಳ ಮಾರುಕಟ್ಟೆಗಳಲ್ಲಿಯೂ ಚಿಕನ್, ಮಟನ್ ಮತ್ತು ಬೀಫ್ ಸ್ಟಾಲ್‌ಗಳನ್ನು ಬಂದ್ ಮಾಡಿರುವುದು ಕಂಡುಬಂದಿದೆ.

ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ ಉಳ್ಳಾಲದಲ್ಲಿಯೂ ಬಂದ್‌ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಸರಗೋಡಿನ ಸಗಟು ಮಾರುಕಟ್ಟೆ ಕೂಡ ಬಿಕೋ ಎನ್ನುತ್ತಿರುವುದು ಕಂಡು ಬಂದಿದೆ.

ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೇ ರೀತಿಯಲ್ಲಿಯೇ ಜನರಿಂದ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಎಸ್‌ಡಿಪಿಐ ಮುಖಂಡರು ತಿಳಿಸಿದ್ದಾರೆ.

ಶಾಲಾ-ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ. ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೀರ್-ಇ-ಷರಿಯತ್"ನ ಮುಖ್ಯಸ್ಥ ಮೌಲಾನಾ ಸಗೀರ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಸಲಾಗಿದ್ದು, ಗುರುವಾರ ಕರ್ನಾಟಕ ಬಂದ್ ತೀರ್ಮಾನಿಸಿದ್ದವು.

ಬಂದ್'ಗೆ ಎಸ್'ಡಿಪಿಐ, ಪಿಎಫ್ಐ, ದಲಿತ್ ಮತ್ತು ಮೈನಾರಿಟಿ ಸೇನೆ, ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಮುಸ್ಲಿಂ ಸಂಘಟನೆಗಳ ಒಕ್ಕೂಟ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಮುಸ್ಲಿಂ ಸಂಘಟನೆಗಳು, ಮುಸ್ಲಿಂ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.