ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ತೆಲುಗು ಖ್ಯಾತ ನಟ ಪವನ್ ಕಲ್ಯಾಣ್

 

ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸಲ್ಲಿಸಿದ ತೆಲುಗು ಖ್ಯಾತ ನಟ ಪವನ್ ಕಲ್ಯಾಣ್

ತೆಲುಗಿನ ಸೂಪರ್ ಸ್ಟಾರ್, ರಾಜಕಾರಣಿ ಪವನ್ ಕಲ್ಯಾಣ್ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಆಗಮಿಸಿದ್ದರು. ಇಂದು ಅವರು ಕ್ಷೇತ್ರದಲ್ಲಿ ಆಶ್ಲೇಷ ಪೂಜೆ ಮತ್ತು ಆದಿ  ಸುಬ್ರಹ್ಮಣ್ಯದ ಹುತ್ತಕ್ಕೆ ವಸ್ತ್ರ ಸಮರ್ಪಣೆ ಮಾಡುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.

ಪೂಜೆ ಪುನಸ್ಕಾರಗಳು ಮುಗಿದ ನಂತರ ಪವನ್ ಕಲ್ಯಾಣ್ ಅವರಿಗೆ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಅವರಿಂದ ಸನ್ಮಾನ ಕೂಡ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪವನ್ ಕಲ್ಯಾಣ್ ಕ್ಷೇತ್ರದ ಸ್ವಚ್ಛತೆಯ ಬಗ್ಗೆ ಕೊಂಡಾಡಿದರು.

‘ಲಕ್ಷಾಂತರ ಭಕ್ತರು ಬರುವ ಈ ದೇವಸ್ಥಾನದ ಪ್ರತೀ ಏಕಾದಶಿಯಂದು ದೇವಸ್ಥಾನದಲ್ಲಿ ನಡೆಸುವ ಸ್ವಚ್ಛತೆ ಕಂಡು ಬೆರಗಾಗಿದೆ. ಪರಿಸರ ಸ್ವಚ್ಛಾತಾ ಜಾಗೃತಿಗಾಗಿ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಈ ಕಾರ್ಯ ಎಲ್ಲ ಕಡೆಗೂ ನಡೆಯಬೇಕು. ಪರಿಸರ ಸ್ವಚ್ಛತೆಯೇ ಆದ್ಯತೆ ಆಗಬೇಕು’ ಎಂದು ಪವನ್ ಕಲ್ಯಾಣ್. 

ಕುಕ್ಕೆಗೆ ಪವನ್ ಕಲ್ಯಾಣ್ ಬರುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಪಾರ ಅಭಿಮಾನಿಗಳು ಅವರನ್ನು ನೋಡಲು ಆಗಮಿಸಿದ್ದರು. ಪೂಜೆ ಮುಗಿದ ನಂತರ ಪವನ್ ಅಭಿಮಾನಿಗಳೊಂದಿಗೆ ಬೆರೆತರು.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.