ಬಾವಿಗೆ ಬಿದ್ದ ಸಹೋದರಿಯರಿಬ್ಬರ ಶವ ಪತ್ತೆ – ನಾಲ್ವರ ಬಂಧನ

ಬಾವಿಗೆ ಬಿದ್ದ ಸಹೋದರಿಯರಿಬ್ಬರ ಶವ ಪತ್ತೆ – ನಾಲ್ವರ ಬಂಧನ

ಬೀದರ್: ಬಾವಿಗೆ ಬಿದ್ದು ಸಾವನ್ನಪ್ಪಿರುವ ಸಹೋದರಿಯರಿಬ್ಬರ ಆತ್ಮಹತ್ಯೆ  ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 4 ಜನ ಆರೋಪಿಗಳ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಾಜೀ, ವಿಠಲ್, ರಾಣಿ ಬಂಧಿತ ಆರೋಪಿಗಳಾಗಿದ್ದಾರೆ. ನಾಲ್ಕು ಜನ ಆರೋಪಿಗಳನ್ನು ಮೇಹಕರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಡೆದಿದ್ದೇನು?: ಎರಡು ದಿನಗಳ ಹಿಂದೆ ಅಂಕಿತ(15) ಹಾಗೂ ಶ್ರದ್ಧಾ(13) ಸಹೋದರಿಯರ ಶವ ಬಾವಿಯಲ್ಲಿ ಪತ್ತೆಯಾಗಿತ್ತು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಅಟ್ಟರ್ಗಾ ಗ್ರಾಮದಲ್ಲಿ ಘಟನೆಯಾಗಿದ್ದು, ಈ ಕುರಿತು ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.

ಮದುವೆ ಸಂಬಂದ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಸಂಬಾಜೀ, ಸಹೋದರಿಯರ ಪೋಷಕರ ಮೇಲೆ ಹಲ್ಲೆ ಮಾಡಿದ್ದನು. ಈ ವಿಚಾರವಾಗಿ ಮನನೊಂದು ಸಹೋದರಿಯರಿಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದರು.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.