ಟ್ಯಾಬ್ಲೋ ಡ್ಯಾಮೇಜ್ ಕಂಟ್ರೋಲ್ – ನಾರಾಯಣ ಗುರು ಹೆಸರಿನಲ್ಲಿ ಶಾಲೆ ಆರಂಭ

 ಟ್ಯಾಬ್ಲೋ ಡ್ಯಾಮೇಜ್ ಕಂಟ್ರೋಲ್ – ನಾರಾಯಣ ಗುರು ಹೆಸರಿನಲ್ಲಿ ಶಾಲೆ ಆರಂಭ

ಬೆಂಗಳೂರು: ಗಣರಾಜ್ಯೋತ್ಸವದ ವೇಳೆ ಕೇರಳದ ಟ್ಯಾಬ್ಲೋವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಬಿಜೆಪಿ ಟೀಕೆಗೆ ಗುರಿಯಾಗಿತ್ತು. ಈಗ ಡ್ಯಾಮೇಜ್ ಕಂಟ್ರೋಲ್ ಮಾಡಲು ಕರ್ನಾಟಕ ಸರ್ಕಾರ ನಾರಾಯಣ ಗುರುಗಳ ಹೆಸರಿನಲ್ಲಿ ಶಾಲೆ ಆರಂಭಿಸಲು ಮುಂದಾಗಿದೆ.

ಮಾನವೀಯತೆ, ಸಮಾನತೆ ಹರಿಕಾರ, ಶ್ರೀನಾರಾಯಣ ಗುರುವರರರ ಸ್ಮರಣಾರ್ಥಕ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ನಿಗಮಗಳ ಮೂಲಕ 400 ಕೋಟಿ ರೂಪಾಯಿ ಮೊತ್ತದಲ್ಲಿ ಈ ಯೋಜನೆಯಮನ್ನು ಹಮ್ಮಿಕೊಳ್ಳಲಾಗುವುದು. ದೇವರಾಜ ಅರಸು ಅಭಿವೃದ್ಧಿ ನಿಗಮದ ಮೂಲಕ ಹಿಂದುಳಿದ ಹಾಗೂ ಅತೀ ಹಿಂದುಳಿದ ಸಮುದಾಯಗಳಾದ ತಿಗಳ, ಮಾಳಿ, ಮಾಳಿ ಮಾಲಗಾg, ಕುಂಬಾರ, ಯಾದವ, ದೇವಾಡಿಗ, ಸಿಂಪಿ, ಕ್ಷತ್ರಿಯ, ಮೇದಾರ, ಕಂಚಿ, ಕುರ್ಮ, ಪಿಂಜಾರ/ ನದಾಫ್, ಕುರುಬ, ಬಲಿಜ, ಈಡಿಗ, ಹಡಪ ಹಾಗೂ ಇತರ ಜನಾಂಗದ ಅಭಿವೃದ್ಧಿಗೆ 400 ಕೋಟಿ ರೂಪಾಯಿ ಮೊತ್ತದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ