ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ: ಸಿದ್ದರಾಮಯ್ಯ


ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ರಾಜರತ್ನ ಪವರ್‌ಸ್ಟಾರ್ ಡಾ.ಪುನೀತ್ರಾಜ್‍ಕುಮಾರ್ ಅಭಿನಯಿಸಿರುವ ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ಕೊಡಬೇಕು. ಈ ಬಗ್ಗೆ ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯುತ್ತೇನೆ. ಬೊಮ್ಮಾಯಿಗೆ ಪುನೀತ್ ಮೇಲೆ ಪ್ರೀತಿ ಇದೆ. ಪುನೀತ್‍ಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು. ಇದರ ಬಗ್ಗೆ ಒತ್ತಾಯ ಮಾಡಿದ್ದೇನೆ.  ಜನಪ್ರಿಯ ನಾಯಕ ರಾಜ್‍ಕುಮಾರ್ ಅವರು ಇದ್ದಾಗ, ನನ್ನನ್ನು ನಮ್ಮ ಕಾಡಿನವರು ಅಂತ ಹೇಳುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.

ಎಲ್ಲರೂ ಜೇಮ್ಸ್ ಚಿತ್ರ ನೋಡಿ, ಪುನೀತ್ ಆತ್ಮಕ್ಕೆ ಚಿರ ಶಾಂತಿ ಸಿಗಲಿ. ನಾನು ಸಾಮಾನ್ಯವಾಗಿ ಚಲನಚಿತ್ರಗಳನ್ನು ನೋಡಲು ಥಿಯೇಟರ್‌ಗೆ ಹೋಗಲ್ಲ. ಯಾರಾದರು ಒತ್ತಾಯ ಮಾಡಿ ಕರೆದರೆ ಹೋಗಿರುತ್ತೇನೆ. ಸ್ವಲ್ಪ ನೋಡಿ ಎದ್ದು ಬಂದಿದ್ದೂ ಇದೆ. ಜೇಮ್ಸ್ ಚಿತ್ರವನ್ನು ಟಿವಿಯಲ್ಲಿ ಬಂದಾಗ ನೋಡುತ್ತೇನೆ. ನಾನು ಈ ಹಿಂದೆ ಪುನೀತ್ ಅವರು ನಟಿಸಿದ್ದ ಚಿತ್ರ ರಾಜಕುಮಾರ ನೋಡಲು ಥಿಯೇಟರ್‌ಗೆ ಹೋಗಿದ್ದೆ ಎಂದು ತಿಳಿಸಿದ್ದಾರೆ.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.