kannada breaking news fast news crime news police news no 1 news channel in Karnataka
Get link
Facebook
X
Pinterest
Email
Other Apps
-
ಚೆನ್ನೈನಲ್ಲಿ ಮೇಯರ್ ಹುದ್ದೆ ಅಲಂಕರಿಸಿದ ಮೊದಲ ದಲಿತ ಮಹಿಳೆ
ಚೆನ್ನೈ: ಇದೇ ಮೊದಲ ಬಾರಿಗೆ ದಲಿತ ಮಹಿಳೆಯೊಬ್ಬರು ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಡಿಎಂಕೆ ಪಕ್ಷವು 28 ವರ್ಷ ವಯಸ್ಸಿನ ಆರ್.ಪ್ರಿಯಾ ಅವರನ್ನು ಮೇಯರ್ ಸ್ಥಾನಕ್ಕೆ ನೇಮಕವಾಗಿದ್ದಾರೆ.
ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚೆನ್ನೈನ ಒಟ್ಟು 200 ವಾರ್ಡ್ಗಳ ಪೈಕಿ ಡಿಎಂಕೆ 153 ವಾರ್ಡ್ಗಳಲ್ಲಿ ಗೆಲುವು ಸಾಧಿಸಿರುವುದರಿಂದ ಪಕ್ಷ ಸೂಚಿಸಿರುವಂತೆ ಪ್ರಿಯಾ ಅವರೇ ಮೇಯರ್ ಆಗುವುದು ಬಹುತೇಕ ಖಚಿತವಾಗಿದೆ. ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ನಂತರ ಪ್ರಿಯಾ ಚೆನ್ನೈನ ಮೂರನೇ ಮಹಿಳಾ ಮೇಯರ್ ಆಗಲಿದ್ದಾರೆ. ಪ್ರಿಯಾ ಅವರು ಮಂಗಳಪುರಂನ ವಾರ್ಡ್ 74ರ ಕೌನ್ಸಿಲರ್ ಆಗಿದ್ದಾರೆ. ಆರ್.ಪ್ರಿಯಾ ಯಾರು ಗೊತ್ತಾ?: ಎಂ.ಕಾಂ ಪದವೀಧರೆಯಾಗಿರುವ ಪ್ರಿಯಾ ಅವರು ಚೆನ್ನೈ ಕಾರ್ಪೊರೇಷನ್ ಮೇಯರ್ ಸ್ಥಾನಕ್ಕೇರಲಿರುವ ಮೂರನೇ ಮಹಿಳೆ. ಈ ಹಿಂದೆ ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ಅವರು ಮೇಯರ್ ಆಗಿ ಅಧಿಕಾರ ನಿರ್ವಹಿಸಿದ್ದಾರೆ. ಡಿಎಂಕೆಯ ಮಾಜಿ ಶಾಸಕ ಚೆಂಗೈ ಶಿವಂ ಅವರ ಮೊಮ್ಮಗಳು ಪ್ರಿಯಾ. ಅವರ ತಂದೆ ಆರ್.ರಾಜನ್ ಸಹ ಡಿಎಂಕೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾರ್ಪೊರೇಷನ್ ಚುನಾವಣೆಯಲ್ಲಿ ಪ್ರಿಯಾ 74ನೇ ವಾರ್ಡ್ನಿಂದ ಆಯ್ಕೆಯಾಗಿದ್ದಾರೆ.
ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್ 50ರಲ್ಲಿ ಭಾರತದ 35 ನಗರಗಳು ನವದೆಹಲಿ: ವಿಶ್ವದಲ್ಲೇ ಅತ್ಯಂತ ವಾಯುಮಾಲಿನ್ಯ ನಗರವಾಗಿ ದೆಹಲಿ ಹೊರಹೊಮ್ಮಿದೆ. ಕಲುಷಿತ ರಾಜಧಾನಿ ಎಂದೇ ದೆಹಲಿ ಕುಖ್ಯಾತಿ ಪಡೆದಿದೆ. ಮಂಗಳವಾರ ಬಿಡುಗಡೆಯಾದ ಸ್ವಿಸ್ ಸಂಸ್ಥೆ IQAir ಸಿದ್ಧಪಡಿಸಿದ ವಿಶ್ವ ವಾಯು ಗುಣಮಟ್ಟ ವರದಿಯ ಪ್ರಕಾರ, ನವದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎನಿಸಿಕೊಂಡಿದೆ. ಅತ್ಯಂತ ಕಳಪೆ ಗಾಳಿಯ ಗುಣಮಟ್ಟ ಹೊಂದಿರುವ 50 ನಗರಗಳ ಪೈಕಿ 35 ನಗರಗಳು ಭಾರತದ್ದೇ ಆಗಿವೆ ಎಂದು ತಿಳಿಸಿದೆ. ಆದರೆ ಚೀನಾದ ಮಾಲಿನ್ಯ ಗುಣಮಟ್ಟ ಸುಧಾರಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಚೀನಾದ ಅರ್ಧಕ್ಕಿಂತ ಹೆಚ್ಚು ನಗರಗಳು ಕಡಿಮೆ ಮಟ್ಟದ ವಾಯುಮಾಲಿನ್ಯ ಕಂಡಿದ್ದು, ಗಾಳಿಯ ಗುಣಮಟ್ಟ ಸುಧಾರಿಸಿದೆ ಎಂದು ಅಧ್ಯಯನ ತಿಳಿಸಿದೆ. ಚೀನಾ ರಾಜಧಾನಿ ಬೀಜಿಂಗ್ನಲ್ಲಿ ಮಾಲಿನ್ಯದ ಮಟ್ಟವು ಸುಧಾರಿಸಿದೆ. ಕಲ್ಲಿದ್ದಲು, ವಿದ್ಯುತ್ ಸ್ಥಾವರ ಮತ್ತು ಮಾಲಿನ್ಯಕಾರಕ ಹೊಗೆ ಹೊರಸೂಸುವ ಚಟುವಟಿಕೆಗಳು, ಉದ್ಯಮಗಳಿಗೆ ಚೀನಾದಲ್ಲಿ ಕಡಿವಾಣ ಹಾಕಲಾಗಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯ ಪ್ರತಿ ಘನ ಮೀಟರ್ಗೆ 5 ಮೈಕ್ರೋಗ್ರಾಂಗಳಷ್ಟು ಗಾಳಿಯ ಗುಣಮಟ್ಟದ ಮಾನದಂಡಗಳನ್ನು ಭಾರತದ ಯಾವುದೇ ನಗರವು ಪೂರೈಸಿಲ್ಲ ಎಂದು IQAir ವರದಿ ಹೇಳಿದೆ. 2021 ರಲ್ಲಿ ಜಾಗತಿಕ ಗಾಳಿಯ ಗುಣಮಟ್ಟದ ಸ್ಥಿತಿಯ ಅವಲೋಕನವನ್ನು ವರದಿ ಪ್ರಸ್ತ...
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಅಂತೆಯೇ ಇಲ್ಲಿ ಬಿಜೆಪಿ 37 ವರ್ಷಗಳ ದಾಖಲೆ ಬರೆದಿದ್ದು, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ' ರಚನೆಯಾಗುತ್ತಿದೆ. By : Naveen Online Desk ಲಖನೌ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಅಂತೆಯೇ ಇಲ್ಲಿ ಬಿಜೆಪಿ 37 ವರ್ಷಗಳ ದಾಖಲೆ ಬರೆದಿದ್ದು, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ' ರಚನೆಯಾಗುತ್ತಿದೆ.
ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ ರಾಯಪುರ: ತಂದೆಯೊಬ್ಬ 7 ವರ್ಷದ ತನ್ನ ಮೃತ ಮಗಳ ದೇಹವನ್ನು ಭುಜದ ಮೇಲೆ ಹೊತ್ತು 10 ಕಿ.ಮೀ ಸಾಗಿದ ಘಟನೆ ಶುಕ್ರವಾರ ಬೆಳಗ್ಗೆ ಸರ್ಗುಜಾ ಜಿಲ್ಲೆಯ ಲಖನ್ಪುರ್ ಗ್ರಾಮದಲ್ಲಿ ನಡೆದಿದೆ. ಘಟನೆ ವೀಡೀಯೋವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ದೃಶ್ಯವನ್ನು ಕಂಡ ಆರೋಗ್ಯ ಮಂತ್ರಿ ಟಿ.ಎಸ್ ಸಿಂಗ್ ದೇವ್ ತನಿಖೆಗೆ ಆದೇಶಿಸಿದ್ದಾರೆ. ವೀಡಿಯೋದಲ್ಲಿ ವ್ಯಕ್ತಿ ತನ್ನ ಹೆಗಲ ಮೇಲೆ ಶವವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಅಮದಲದಲ್ಲಿರುವ ಮನೆ ತಲುಪಲು ಕಾಲ್ನಡಿಗೆಯಲ್ಲಿ ಸುಮಾರು 10 ಕಿ.ಮೀ ದೂರ ಕ್ರಮಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶುಕ್ರವಾರ ಜಿಲ್ಲಾ ಕೇಂದ್ರವಾದ ಅಂಬಿಕಾಪುರದಲ್ಲಿದ್ದ ಆರೋಗ್ಯ ಸಚಿವ ಸಿಂಗ್ ದೇವ್ ಅವರು ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗೆ ಸೂಚಿಸಿದ್ದಾರೆ. ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವಿಡಿಯೋ ನೋಡಿದೆ. ಇದು ಗೊಂದಲದ ಸಂಗತಿಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಎಚ್ಒಗೆ ಹೇಳಿದ್ದೇನೆ. ಅಲ್ಲಿ ನೇಮಕಗೊಂಡು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದರು. ಕರ್ತವ್ಯ ನಿರತ ಆರೋಗ್ಯ ಸಿಬ್ಬಂದಿ ಮನೆಯವರ ಮನವೊಲಿ...
Comments
Post a Comment