kannada breaking news fast news crime news police news no 1 news channel in Karnataka
Get link
Facebook
X
Pinterest
Email
Other Apps
-
ಚೆನ್ನೈನಲ್ಲಿ ಮೇಯರ್ ಹುದ್ದೆ ಅಲಂಕರಿಸಿದ ಮೊದಲ ದಲಿತ ಮಹಿಳೆ
ಚೆನ್ನೈ: ಇದೇ ಮೊದಲ ಬಾರಿಗೆ ದಲಿತ ಮಹಿಳೆಯೊಬ್ಬರು ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಡಿಎಂಕೆ ಪಕ್ಷವು 28 ವರ್ಷ ವಯಸ್ಸಿನ ಆರ್.ಪ್ರಿಯಾ ಅವರನ್ನು ಮೇಯರ್ ಸ್ಥಾನಕ್ಕೆ ನೇಮಕವಾಗಿದ್ದಾರೆ.
ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚೆನ್ನೈನ ಒಟ್ಟು 200 ವಾರ್ಡ್ಗಳ ಪೈಕಿ ಡಿಎಂಕೆ 153 ವಾರ್ಡ್ಗಳಲ್ಲಿ ಗೆಲುವು ಸಾಧಿಸಿರುವುದರಿಂದ ಪಕ್ಷ ಸೂಚಿಸಿರುವಂತೆ ಪ್ರಿಯಾ ಅವರೇ ಮೇಯರ್ ಆಗುವುದು ಬಹುತೇಕ ಖಚಿತವಾಗಿದೆ. ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ನಂತರ ಪ್ರಿಯಾ ಚೆನ್ನೈನ ಮೂರನೇ ಮಹಿಳಾ ಮೇಯರ್ ಆಗಲಿದ್ದಾರೆ. ಪ್ರಿಯಾ ಅವರು ಮಂಗಳಪುರಂನ ವಾರ್ಡ್ 74ರ ಕೌನ್ಸಿಲರ್ ಆಗಿದ್ದಾರೆ. ಆರ್.ಪ್ರಿಯಾ ಯಾರು ಗೊತ್ತಾ?: ಎಂ.ಕಾಂ ಪದವೀಧರೆಯಾಗಿರುವ ಪ್ರಿಯಾ ಅವರು ಚೆನ್ನೈ ಕಾರ್ಪೊರೇಷನ್ ಮೇಯರ್ ಸ್ಥಾನಕ್ಕೇರಲಿರುವ ಮೂರನೇ ಮಹಿಳೆ. ಈ ಹಿಂದೆ ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ಅವರು ಮೇಯರ್ ಆಗಿ ಅಧಿಕಾರ ನಿರ್ವಹಿಸಿದ್ದಾರೆ. ಡಿಎಂಕೆಯ ಮಾಜಿ ಶಾಸಕ ಚೆಂಗೈ ಶಿವಂ ಅವರ ಮೊಮ್ಮಗಳು ಪ್ರಿಯಾ. ಅವರ ತಂದೆ ಆರ್.ರಾಜನ್ ಸಹ ಡಿಎಂಕೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾರ್ಪೊರೇಷನ್ ಚುನಾವಣೆಯಲ್ಲಿ ಪ್ರಿಯಾ 74ನೇ ವಾರ್ಡ್ನಿಂದ ಆಯ್ಕೆಯಾಗಿದ್ದಾರೆ.
ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್ 50ರಲ್ಲಿ ಭಾರತದ 35 ನಗರಗಳು ನವದೆಹಲಿ: ವಿಶ್ವದಲ್ಲೇ ಅತ್ಯಂತ ವಾಯುಮಾಲಿನ್ಯ ನಗರವಾಗಿ ದೆಹಲಿ ಹೊರಹೊಮ್ಮಿದೆ. ಕಲುಷಿತ ರಾಜಧಾನಿ ಎಂದೇ ದೆಹಲಿ ಕುಖ್ಯಾತಿ ಪಡೆದಿದೆ. ಮಂಗಳವಾರ ಬಿಡುಗಡೆಯಾದ ಸ್ವಿಸ್ ಸಂಸ್ಥೆ IQAir ಸಿದ್ಧಪಡಿಸಿದ ವಿಶ್ವ ವಾಯು ಗುಣಮಟ್ಟ ವರದಿಯ ಪ್ರಕಾರ, ನವದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ಎನಿಸಿಕೊಂಡಿದೆ. ಅತ್ಯಂತ ಕಳಪೆ ಗಾಳಿಯ ಗುಣಮಟ್ಟ ಹೊಂದಿರುವ 50 ನಗರಗಳ ಪೈಕಿ 35 ನಗರಗಳು ಭಾರತದ್ದೇ ಆಗಿವೆ ಎಂದು ತಿಳಿಸಿದೆ. ಆದರೆ ಚೀನಾದ ಮಾಲಿನ್ಯ ಗುಣಮಟ್ಟ ಸುಧಾರಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಚೀನಾದ ಅರ್ಧಕ್ಕಿಂತ ಹೆಚ್ಚು ನಗರಗಳು ಕಡಿಮೆ ಮಟ್ಟದ ವಾಯುಮಾಲಿನ್ಯ ಕಂಡಿದ್ದು, ಗಾಳಿಯ ಗುಣಮಟ್ಟ ಸುಧಾರಿಸಿದೆ ಎಂದು ಅಧ್ಯಯನ ತಿಳಿಸಿದೆ. ಚೀನಾ ರಾಜಧಾನಿ ಬೀಜಿಂಗ್ನಲ್ಲಿ ಮಾಲಿನ್ಯದ ಮಟ್ಟವು ಸುಧಾರಿಸಿದೆ. ಕಲ್ಲಿದ್ದಲು, ವಿದ್ಯುತ್ ಸ್ಥಾವರ ಮತ್ತು ಮಾಲಿನ್ಯಕಾರಕ ಹೊಗೆ ಹೊರಸೂಸುವ ಚಟುವಟಿಕೆಗಳು, ಉದ್ಯಮಗಳಿಗೆ ಚೀನಾದಲ್ಲಿ ಕಡಿವಾಣ ಹಾಕಲಾಗಿದೆ ಎಂಬುದು ವರದಿಯಿಂದ ತಿಳಿದುಬಂದಿದೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯ ಪ್ರತಿ ಘನ ಮೀಟರ್ಗೆ 5 ಮೈಕ್ರೋಗ್ರಾಂಗಳಷ್ಟು ಗಾಳಿಯ ಗುಣಮಟ್ಟದ ಮಾನದಂಡಗಳನ್ನು ಭಾರತದ ಯಾವುದೇ ನಗರವು ಪೂರೈಸಿಲ್ಲ ಎಂದು IQAir ವರದಿ ಹೇಳಿದೆ. 2021 ರಲ್ಲಿ ಜಾಗತಿಕ ಗಾಳಿಯ ಗುಣಮಟ್ಟದ ಸ್ಥಿತಿಯ ಅವಲೋಕನವನ್ನು ವರದಿ ಪ್ರಸ್ತ...
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಅಂತೆಯೇ ಇಲ್ಲಿ ಬಿಜೆಪಿ 37 ವರ್ಷಗಳ ದಾಖಲೆ ಬರೆದಿದ್ದು, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ' ರಚನೆಯಾಗುತ್ತಿದೆ. By : Naveen Online Desk ಲಖನೌ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಅಂತೆಯೇ ಇಲ್ಲಿ ಬಿಜೆಪಿ 37 ವರ್ಷಗಳ ದಾಖಲೆ ಬರೆದಿದ್ದು, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ' ರಚನೆಯಾಗುತ್ತಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ. ಪೆಟ್ರೋಲ್ ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ಕೂಡಲೇ ವಜಾ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ NSUI ಈ ಮೂಲಕ ಆಗ್ರಹಿಸುತ್ತದೆ. ಕೇಂದ್ರದಲ್ಲಿ NDA ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಅಗತ್ಯವಸ್ತುಗಳ ಬೆಲೆ ಏರಿಕೆ ಆಗುತ್ತಲೇ ಇದೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆಮಾಡುವ ಬದಲು ಮನಸ್ಸಿಗೆ ಬಂದಂತೆ ಹೆಚ್ಚಳ ಮಾಡುತ್ತಲೇ ಬಂದಿದೆ ಇದರಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಉಂಟಾಗುತ್ತಿದೆ. ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದಾಗಿ ದೇಶದ ಅರ್ಥ ವ್ಯವಸ್ಥೆ ಹಾಳಾಗಿದ್ದು ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟದಾಯಕ ಪರಿಸ್ಥಿತಿ ಇರುವಾಗಲೇ ಕೋವಿಡ್ ವೈರಸ್ನ ದಾಳಿಯಿಂದ ಜನರು ಮತ್ತಷ್ಟು ಹೈರಾಣ ರಗಿದ್ದಾರೆ ಅಗತ್ಯವಸ್ತುಗಳ ಬೆಲೆ ದಿನೇದಿನೇ ಹೆಚ್ಚಾಗುತ್ತಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗುತ್ತಿದೆ ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಉಕ್ರೇನ್ ರಷ್ಯಾ ಇದ್ದದ ನೆಪದಲ್ಲಿ ಮತ್ತೆ ಮತ್ತೆ ಇಂಧನ ಬೆಲೆ ಹೆಚ್ಚಳ ಮಾಡುತ್ತಿದೆ ಅಗತ್ಯವಸ್ತುಗಳ ಬೆಲೆ ನಿಯಂತ್ರ...
Comments
Post a Comment