kannada breaking news fast news crime news police news no 1 news channel in Karnataka
Get link
Facebook
X
Pinterest
Email
Other Apps
-
ಚೆನ್ನೈನಲ್ಲಿ ಮೇಯರ್ ಹುದ್ದೆ ಅಲಂಕರಿಸಿದ ಮೊದಲ ದಲಿತ ಮಹಿಳೆ
ಚೆನ್ನೈ: ಇದೇ ಮೊದಲ ಬಾರಿಗೆ ದಲಿತ ಮಹಿಳೆಯೊಬ್ಬರು ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಡಿಎಂಕೆ ಪಕ್ಷವು 28 ವರ್ಷ ವಯಸ್ಸಿನ ಆರ್.ಪ್ರಿಯಾ ಅವರನ್ನು ಮೇಯರ್ ಸ್ಥಾನಕ್ಕೆ ನೇಮಕವಾಗಿದ್ದಾರೆ.
ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚೆನ್ನೈನ ಒಟ್ಟು 200 ವಾರ್ಡ್ಗಳ ಪೈಕಿ ಡಿಎಂಕೆ 153 ವಾರ್ಡ್ಗಳಲ್ಲಿ ಗೆಲುವು ಸಾಧಿಸಿರುವುದರಿಂದ ಪಕ್ಷ ಸೂಚಿಸಿರುವಂತೆ ಪ್ರಿಯಾ ಅವರೇ ಮೇಯರ್ ಆಗುವುದು ಬಹುತೇಕ ಖಚಿತವಾಗಿದೆ. ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ನಂತರ ಪ್ರಿಯಾ ಚೆನ್ನೈನ ಮೂರನೇ ಮಹಿಳಾ ಮೇಯರ್ ಆಗಲಿದ್ದಾರೆ. ಪ್ರಿಯಾ ಅವರು ಮಂಗಳಪುರಂನ ವಾರ್ಡ್ 74ರ ಕೌನ್ಸಿಲರ್ ಆಗಿದ್ದಾರೆ. ಆರ್.ಪ್ರಿಯಾ ಯಾರು ಗೊತ್ತಾ?: ಎಂ.ಕಾಂ ಪದವೀಧರೆಯಾಗಿರುವ ಪ್ರಿಯಾ ಅವರು ಚೆನ್ನೈ ಕಾರ್ಪೊರೇಷನ್ ಮೇಯರ್ ಸ್ಥಾನಕ್ಕೇರಲಿರುವ ಮೂರನೇ ಮಹಿಳೆ. ಈ ಹಿಂದೆ ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ಅವರು ಮೇಯರ್ ಆಗಿ ಅಧಿಕಾರ ನಿರ್ವಹಿಸಿದ್ದಾರೆ. ಡಿಎಂಕೆಯ ಮಾಜಿ ಶಾಸಕ ಚೆಂಗೈ ಶಿವಂ ಅವರ ಮೊಮ್ಮಗಳು ಪ್ರಿಯಾ. ಅವರ ತಂದೆ ಆರ್.ರಾಜನ್ ಸಹ ಡಿಎಂಕೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾರ್ಪೊರೇಷನ್ ಚುನಾವಣೆಯಲ್ಲಿ ಪ್ರಿಯಾ 74ನೇ ವಾರ್ಡ್ನಿಂದ ಆಯ್ಕೆಯಾಗಿದ್ದಾರೆ.
ಮಗಳ ಮೃತ ದೇಹ ಹೊತ್ತು 10 ಕಿ.ಮೀ ಸಾಗಿದ ತಂದೆ ರಾಯಪುರ: ತಂದೆಯೊಬ್ಬ 7 ವರ್ಷದ ತನ್ನ ಮೃತ ಮಗಳ ದೇಹವನ್ನು ಭುಜದ ಮೇಲೆ ಹೊತ್ತು 10 ಕಿ.ಮೀ ಸಾಗಿದ ಘಟನೆ ಶುಕ್ರವಾರ ಬೆಳಗ್ಗೆ ಸರ್ಗುಜಾ ಜಿಲ್ಲೆಯ ಲಖನ್ಪುರ್ ಗ್ರಾಮದಲ್ಲಿ ನಡೆದಿದೆ. ಘಟನೆ ವೀಡೀಯೋವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ದೃಶ್ಯವನ್ನು ಕಂಡ ಆರೋಗ್ಯ ಮಂತ್ರಿ ಟಿ.ಎಸ್ ಸಿಂಗ್ ದೇವ್ ತನಿಖೆಗೆ ಆದೇಶಿಸಿದ್ದಾರೆ. ವೀಡಿಯೋದಲ್ಲಿ ವ್ಯಕ್ತಿ ತನ್ನ ಹೆಗಲ ಮೇಲೆ ಶವವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಅಮದಲದಲ್ಲಿರುವ ಮನೆ ತಲುಪಲು ಕಾಲ್ನಡಿಗೆಯಲ್ಲಿ ಸುಮಾರು 10 ಕಿ.ಮೀ ದೂರ ಕ್ರಮಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶುಕ್ರವಾರ ಜಿಲ್ಲಾ ಕೇಂದ್ರವಾದ ಅಂಬಿಕಾಪುರದಲ್ಲಿದ್ದ ಆರೋಗ್ಯ ಸಚಿವ ಸಿಂಗ್ ದೇವ್ ಅವರು ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿಗೆ ಸೂಚಿಸಿದ್ದಾರೆ. ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವಿಡಿಯೋ ನೋಡಿದೆ. ಇದು ಗೊಂದಲದ ಸಂಗತಿಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂಎಚ್ಒಗೆ ಹೇಳಿದ್ದೇನೆ. ಅಲ್ಲಿ ನೇಮಕಗೊಂಡು ಕರ್ತವ್ಯ ನಿರ್ವಹಿಸಲು ಸಾಧ್ಯವಾಗದವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದರು. ಕರ್ತವ್ಯ ನಿರತ ಆರೋಗ್ಯ ಸಿಬ್ಬಂದಿ ಮನೆಯವರ ಮನವೊಲಿ...
ಸಾರ್ವಜನಿಕ ಶೌಚಾಲಯ ಕದ್ದು, 45 ಸಾವಿರ ರೂ.ಗೆ ಮಾರಿದ ಕಿರಾತಕ ಹೈದರಾಬಾದ್: ಆಟೋ ಟ್ರಾಲಿ ಚಾಲಕನೋರ್ವ ಸಾರ್ವಜನಿಕ ಪೋರ್ಟಬಲ್ ಶೌಚಾಲಯವನ್ನು ಕದ್ದು 45 ಸಾವಿರಕ್ಕೆ ಮಾರಾಟ ಮಾಡಿದ್ದಾನೆ. ಆರೋಪಿಯನ್ನು ಎಂ ಜೋಗಯ್ಯ ಎಂದು ಗುರುತಿಸಲಾಗಿದ್ದು, ಈತ ಮೇದಕ್ ಜಿಲ್ಲೆಯ ದೋಮಲಗುಡ ನಿವಾಸಿಯಾಗಿದ್ದಾನೆ. ಇದೀಗ ಮಲ್ಕಾಜ್ಗಿರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಜೋಗಯ್ಯ ಮತ್ತು ಆತನ ಇಬ್ಬರು ಸಹಚರರಾದ ಬುದ್ಧ ಭವನದ ಜಿಎಚ್ಎಂಸಿ ಕಾರ್ಯಕರ್ತ ಅರುಣ್ ಕುಮಾರ್ ಮತ್ತು ಮಲ್ಕಾಜ್ಗಿರಿಯ ಆನಂದಬಾಗ್ನಲ್ಲಿರುವ ಜೈನ್ ಕನ್ಸ್ಟ್ರಕ್ಷನ್ನ ಬಿಕ್ಷಪತಿ ಸಾರ್ವಜನಿಕ ಆಸ್ತಿಯನ್ನು ಕದ್ದು ಪರಾರಿಯಾಗಿದ್ದರು. ನಂತರ ಜೋಗಯ್ಯ ಸಾರ್ವಜನಿಕ ಶೌಚಾಲಯವನ್ನು 45,000 ರೂ.ಗೆ ಮುಶೀರಾಬಾದ್ನ ಸ್ಕ್ರ್ಯಾಪ್ ವ್ಯಾಪಾರಿಗೆ ಮಾರಾಟ ಮಾಡಿದ್ದಾನೆ. ಬಳಿಕ ಬಂದ ಹಣವನ್ನು ತನ್ನ ವೈಯಕ್ತಿಕ ಖರ್ಚಿಗೆ ಇಟ್ಟುಕೊಂಡಿದ್ದ. ಆದರೆ ಕಳೆದ ವಾರ ಜಿಎಚ್ಎಂಸಿ ಜಿಲ್ಲಾಧಿಕಾರಿ ಜಿ.ರಾಜು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದರು. ಈ ವೇಳೆ ಜೋಗಯ್ಯ ಕಂಡು ಬಂದಿದ್ದು, ಇದೀಗ ಪೊಲೀಸರು ಆತನನ್ನು ಬಂಧಿಸಿ, ಆರೋಪಿ ಬಳಿ ಇದ್ದ ಹಣ ಮತ್ತು ಆಟೋ ಟ್ರಾಲಿಯನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
60 ಅಡಿ ಬಾವಿ ತೋಡಿದ ಚಿಕ್ಕಮಗಳೂರಿನ ಭಗೀರಥ ದಂಪತಿ ಉರಿ ಬಿಸಿಲಲ್ಲಿ ಬಾವಿಗೆ ಇಳೀತಿರೋ ವ್ಯಕ್ತಿ… ಮಣ್ಣನ್ನ ತುಂಬಿರೋ ಬುಟ್ಟಿಯನ್ನ ಮೇಲಕ್ಕೆ ಎತ್ತುತ್ತಿರೋ ಮಹಿಳೆ. ಬಾವಿಗೆ ಇಳಿದ ಹಗ್ಗದ ಸಹಾಯದಿಂದಲೇ ಮೇಲಕ್ಕೆ ಬರ್ತಿರೋ ವ್ಯಕ್ತಿ. ಇನ್ನೂ ನೀರು ಬಂದಿಲ್ಲ ಎಷ್ಟು ಆಳ ತೆಗೆಯಬೇಕೋ ಅಂತ ಯೋಚಿಸ್ತಿರೋ ದಂಪತಿ. ಏನಿದು, ಬಾವಿ ಕಥೆ ಅಂತಿದ್ದೀರಾ… ಈ ಬಾವಿಯ ಹಿಂದೆ ಮೈನವಿರೇಳಿಸೋ ಸ್ಟೋರಿ ಇದೆ. ಈ ದಂಪತಿ ಹೆಸ್ರು ರಾಜು-ಶಾರದಾ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಣಜೂರಿನವರು. 30*40 ಸೈಟಲ್ಲಿ ಗುಡಿಸಲು ಹಾಕ್ಕೊಂಡ್ ಬದುಕುತ್ತಿದ್ದಾರೆ. ಕೂಲಿಯೇ ಇವ್ರ ಜೀವಾಳ. ದಿನವಿಡಿ ದಣಿದು ಬಂದ್ರೆ ಸಂಜೆ ನೀರಿಗೆ ಹಾಹಾಕಾರ. ನೀರು ಕೇಳಿದರೆ ಜನ ಜಗಳಕ್ಕೆ ಬರ್ತಿದ್ರು. ಸಮೀಪದ ನಲ್ಲಿ ಬಳಿ ನೀರಿಗೆ ಹೋದಾಗ ಗಲಾಟೆಯೂ ಆಯ್ತು. ಯಾರನ್ನ ಕೇಳಿದ್ರು ನೀರು ಕೊಡ್ಲಿಲ್ಲ. ಆಗಲೇ ತೀರ್ಮಾನಿಸಿದ ಈ ದಂಪತಿ ನೀರಿಗಾಗಿ ಬಾವಿಯನ್ನೇ ತೆಗೆದಿದ್ದಾರೆ. 30*40 ಸೈಟಿನಲ್ಲಿ ದಂಪತಿಗಳಿಬ್ಬರು ಸೇರಿ 5 ಅಡಿ ಅಗಲ, 60 ಅಡಿ ಆಳದ ಬಾವಿಯನ್ನೇ ತೋಡಿದ್ದಾರೆ. ಹಗಲಲ್ಲಿ ಕೂಲಿಗೂ ಹೋಗಿ ಬೆಳಗ್ಗೆ 2 ಗಂಟೆ, ಸಂಜೆ 2 ಗಂಟೆ ದಿನಕ್ಕೆ ನಾಲ್ಕೇ ಗಂಟೆ ಕೆಲಸ ಮಾಡಿ ಬಾವಿಯನ್ನೇ ತೋಡಿದ್ದಾರೆ. ಬಾವಿಯಲ್ಲಿ ನೀರು ಜಿನುಗುತ್ತಿದ್ದು ಇನ್ನೈದು ಅಡಿ ತೆಗೆದರೆ ಸಮೃದ್ಧ ಜಲ ಉಕ್ಕಲಿದೆ. ನೀರಿಲ್ಲ ಅಂತ ನೊಂದು ಕೂತ ದಂಪತಿಗೆ ಹೊಳೆದದ್ದೇ ಬಾವಿ ಐಡಿಯಾ. 13 ವರ್ಷ ಶಬರಿಮಲೆಗೆ ಹೋಗಿದ್...
Comments
Post a Comment