kannada breaking news fast news crime news police news no 1 news channel in Karnataka
Get link
Facebook
X
Pinterest
Email
Other Apps
-
ಚೆನ್ನೈನಲ್ಲಿ ಮೇಯರ್ ಹುದ್ದೆ ಅಲಂಕರಿಸಿದ ಮೊದಲ ದಲಿತ ಮಹಿಳೆ
ಚೆನ್ನೈ: ಇದೇ ಮೊದಲ ಬಾರಿಗೆ ದಲಿತ ಮಹಿಳೆಯೊಬ್ಬರು ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಡಿಎಂಕೆ ಪಕ್ಷವು 28 ವರ್ಷ ವಯಸ್ಸಿನ ಆರ್.ಪ್ರಿಯಾ ಅವರನ್ನು ಮೇಯರ್ ಸ್ಥಾನಕ್ಕೆ ನೇಮಕವಾಗಿದ್ದಾರೆ.
ಗ್ರೇಟರ್ ಚೆನ್ನೈ ಕಾರ್ಪೊರೇಷನ್ (ಜಿಸಿಸಿ) ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚೆನ್ನೈನ ಒಟ್ಟು 200 ವಾರ್ಡ್ಗಳ ಪೈಕಿ ಡಿಎಂಕೆ 153 ವಾರ್ಡ್ಗಳಲ್ಲಿ ಗೆಲುವು ಸಾಧಿಸಿರುವುದರಿಂದ ಪಕ್ಷ ಸೂಚಿಸಿರುವಂತೆ ಪ್ರಿಯಾ ಅವರೇ ಮೇಯರ್ ಆಗುವುದು ಬಹುತೇಕ ಖಚಿತವಾಗಿದೆ. ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ನಂತರ ಪ್ರಿಯಾ ಚೆನ್ನೈನ ಮೂರನೇ ಮಹಿಳಾ ಮೇಯರ್ ಆಗಲಿದ್ದಾರೆ. ಪ್ರಿಯಾ ಅವರು ಮಂಗಳಪುರಂನ ವಾರ್ಡ್ 74ರ ಕೌನ್ಸಿಲರ್ ಆಗಿದ್ದಾರೆ. ಆರ್.ಪ್ರಿಯಾ ಯಾರು ಗೊತ್ತಾ?: ಎಂ.ಕಾಂ ಪದವೀಧರೆಯಾಗಿರುವ ಪ್ರಿಯಾ ಅವರು ಚೆನ್ನೈ ಕಾರ್ಪೊರೇಷನ್ ಮೇಯರ್ ಸ್ಥಾನಕ್ಕೇರಲಿರುವ ಮೂರನೇ ಮಹಿಳೆ. ಈ ಹಿಂದೆ ತಾರಾ ಚೆರಿಯನ್ ಮತ್ತು ಕಾಮಾಕ್ಷಿ ಜಯರಾಮನ್ ಅವರು ಮೇಯರ್ ಆಗಿ ಅಧಿಕಾರ ನಿರ್ವಹಿಸಿದ್ದಾರೆ. ಡಿಎಂಕೆಯ ಮಾಜಿ ಶಾಸಕ ಚೆಂಗೈ ಶಿವಂ ಅವರ ಮೊಮ್ಮಗಳು ಪ್ರಿಯಾ. ಅವರ ತಂದೆ ಆರ್.ರಾಜನ್ ಸಹ ಡಿಎಂಕೆ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಕಾರ್ಪೊರೇಷನ್ ಚುನಾವಣೆಯಲ್ಲಿ ಪ್ರಿಯಾ 74ನೇ ವಾರ್ಡ್ನಿಂದ ಆಯ್ಕೆಯಾಗಿದ್ದಾರೆ.
ಕಾಶ್ಮೀರ ಹತ್ಯಾಕಾಂಡ – ಮೂರು ಬೇಡಿಕೆಯನ್ನಿಟ್ಟು ಮರು ತನಿಖೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ ನವದೆಹಲಿ: ಬಾಲಿವುಡ್ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಾಣುತ್ತಿರುವ ಬೆನ್ನಲ್ಲೇ 1990ರಲ್ಲಿ ಕಾಶ್ಮೀರ ಪಂಡಿತರ ಹತ್ಯಾಕಾಂಡದ ಕುರಿತು ಮರು ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕಾಶ್ಮೀರ ಪಂಡಿತರ ಸಂಘಟನೆ ʼರೂಟ್ ಇನ್ ಕಾಶ್ಮೀರ್ʼ ಸುಪ್ರೀಂ ಕೋರ್ಟ್ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದೆ. ಈ ಮೂಲಕ 2017ರಲ್ಲಿ ವಜಾಗೊಂಡಿದ್ದ ಪ್ರಕರಣಕ್ಕೆ ಈಗ ಮರುಜೀವ ಬಂದಿದೆ. ಕೇವಲ ಊಹೆಯ ಆಧಾರದಲ್ಲಿ ಆರಂಭಿಕ ಹಂತದಲ್ಲಿ ರಿಟ್ ಅರ್ಜಿಯನ್ನು ವಜಾಗೊಳಿಸಿರುವುದು ಸರಿಯಲ್ಲ. 2007 ರ ಜಪಾನಿ ಸಾಹೂ ವರ್ಸಸ್ ಚಂದ್ರ ಶೇಖರ್ ಮೊಹಂತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ “ಅಪರಾಧ ಎಂದಿಗೂ ಸಾಯುವುದಿಲ್ಲ” ಎಂದು ಹೇಳಿದೆ. ಹೀಗಾಗಿ ಮತ್ತೊಮ್ಮೆ ಅರ್ಜಿಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದೆ. ಮೂರು ಬೇಡಿಕೆ: ಅರ್ಜಿಯಲ್ಲಿ ಮೂರು ಬೇಡಿಕೆಯನ್ನು ಕೋರ್ಟ್ ಮುಂದೆ ಇರಿಸಲಾಗಿದೆ. ಈ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸೀನ್ ಮಲಿಕ್ ಮತ್ತು ಬಿಟ್ಟಾ ಕರಾಟೆಯನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಬೇಕು. ಹತ್ಯಾಕಾಂಡದ ಸಂಪೂರ್ಣ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕು. ಮೂರನೇಯದಾಗಿ ಈ ಘಟನೆಯ ತನಿಖೆಗೆ ಸ್ವತಂತ್ರ ತನಿಖಾ ಆಯೋಗವನ್ನು ರಚಿಸಲು ಆದೇಶ ನೀಡಬೇಕು ಎಂದು ಬೇಡ...
ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ ಬೆಂಗಳೂರು: ಕಾಂಗ್ರೆಸ್ ಪ್ರತಿಭಟನೆ ಬೆನ್ನಲ್ಲೇ ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನವನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ರಾಜ್ಯ ಮಹತ್ವಾಕಾಂಕ್ಷಿ ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸುವುದು. ಈ ಯೋಜೆನೆಗೆ 2ನೇ ಹಂತದ 260 ಕಿ.ಮೀ ಉದ್ದ ಗುರತ್ವ ಕಾಲುವೆ ಟಿ.ಜಿ ಹಳ್ಳಿ- ರಾಮನಗರ ಫೀಡರ್, ಮಧುಗಿರಿ ಫೀಡರ್ ಹಾಗೂ ಟಿ.ಜಿ ಗೌರೀಬಿದನೂರು ಫೀಡರ್ ಕಾಲುವೆ ಕಾಮಗಾರಿಗಳನ್ನು ಪ್ರಸ್ತಕ ಸಾಲಿನಲ್ಲಿ ಪೂರ್ಣಗೊಳಿಸಿ, ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರುಗಿಸಲು ಹಾಗೂ ಯೋಜೆನಗೆ ಉಳಿಗೆ ಕಾಮಗಾರಿಗಳನ್ನು ಹಂತ, ಹಂತವಾಗಿ ಕಾರ್ಯಗತಗೊಳಿಸಲು ಕ್ರಮವಹಿಸಲಾಗುವುದು. ಈ ಯೋಜನೆ ಅನುಷ್ಠಾನಕ್ಕೆ 3,000 ಕೋಟಿ ರೂಪಾಯಿ ಅನುದಾನ ಒದಗಿಲಸಾಗುವುದು. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನಾ ವರದಿಗೆ ಕೇಂದ್ರ ಸರ್ಕಾರದ ಸಮಕ್ಷ ಪ್ರಾಧಿಕಾರಿಗಳ ತೀರುವಳಿಗನ್ನು ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಯ ಅನುಷ್ಠಾನಕ್ಕೆ ಪ್ರಸ್ತಕ ಸಾಲಿನಲ್ಲಿ 1,000 ಕೋಟಿ ರೂಪಾಯಿ ಅನುದಾನವನ್ನು ಒದಗಿಸಲಾಗುವುದು.
ಪಂಜಾಬ್ನಲ್ಲಿ AAP ಗೆದ್ದಿದ್ದು ಹೇಗೆ? ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party) 88 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಸಾಧನೆಯತ್ತ ಸಾಗಿದೆ. ಕಳೆದ 70 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಆಳಿದ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ (SDA) ಸಾಂಪ್ರದಾಯಿಕ ಪಕ್ಷಗಳಿಗಿಂತ ಈಗ ಎಎಪಿ ಮುನ್ನಡೆ ಸಾಧಿಸಲು ಐದು ಪ್ರಮುಖ ಕಾರಣಗಳಿವೆ. ಪಂಜಾಬ್ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಸರ್ಕಾರಗಳ ಆಡಳಿತವನ್ನು ನೋಡಿದ್ದರು. ಹೊಸ ಪಕ್ಷಕ್ಕೆ ಅಧಿಕಾರ ನೀಡುವ ಬಯಕೆಯನ್ನು ಹೊಂದಿದ್ದರು. ಇದಕ್ಕೆ ಪೂರಕ ಎನ್ನುವಂತೆ ಒಂದು ಅವಕಾಶವನ್ನು ಎಎಪಿ ಕೇಳಿತ್ತು. ದೆಹಲಿ ಸರ್ಕಾರದ ಜನಪ್ರಿಯ ಯೋಜನೆಗಳು ಪಂಜಾಬ್ ಜನರ ಗಮನ ಸೆಳೆದಿವೆ. ಶಾಲೆಗಳ ಅಭಿವೃದ್ಧಿ, ಉಚಿತ ವಿದ್ಯುತ್ – ನೀರು ಜನರನ್ನು ಸೆಳೆಯಲು ಮತ್ತೊಂದು ಕಾರಣವಾಗಿದೆ. ಬಿಜೆಪಿಗೆ ಅಸ್ತಿತ್ವ ಇಲ್ಲ, ಮಾಜಿ ಸಿಎಂ ಅಮರೀಂದರ್ ಸಿಂಗ್ ವಯಸ್ಸಿನ ಕಾರಣ ಪಂಜಾಬ್ ಜನರು ಕೈ ಬಿಟ್ಟರು ಎಂದು ವಿಶ್ಲೇಷಿಸಲಾಗಿದೆ. ಅಕಾಲಿದಳ ಬಿಜೆಪಿ ಜೊತೆಗಿದ್ದ ಕಾರಣ ಮತ್ತು ಈಗಾಗಲೇ ಆಡಳಿತ ನೋಡಿರುವ ಕಾರಣ ಜನ ತಿರಸ್ಕರಿಸಿದ್ದಾರೆ. ಇನ್ನು ಕಾಂಗ್ರೆಸ್ ಒಳ ಬಂಡಾಯ, ನಾಯಕರ ನಡುವಿನ ಜಗಳ, ಸಿಎಂ ಅಭ್ಯರ್ಥಿ ಘೋಷಣೆ ವಿಳಂಬವೂ ಆಪ್ಗೆ ನೆರವುವಾಗಿದೆ. ಕಳೆದ ಬಾರಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದ ಆಪ್ ಈ ಬಾರಿ ಅದ್ಭುತವಾಗಿ ಆಗಿ ಪ್ರಚಾರ ನಡೆ...
Comments
Post a Comment