ರೇಸ್ ವೀಕ್ಷಿಸಲು ಬಂದ ಮೂವರ ಮೇಲೆ ಬಂಡಿ ಸಮೇತ ಹಾಯ್ದ ಕುದುರೆ


ರೇಸ್ ವೀಕ್ಷಿಸಲು ಬಂದ ಮೂವರ ಮೇಲೆ ಬಂಡಿ ಸಮೇತ ಹಾಯ್ದ ಕುದುರೆ

ಚಿಕ್ಕೋಡಿ(ಬೆಳಗಾವಿ): ಕುದುರೆಗಳ ಓಟದ ಸಂದರ್ಭದಲ್ಲಿ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ ಮೂವರ ಮೇಲೆ ಬಂಡಿ ಸಮೇತ ಕುದುರೆ ಹಾಯ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ್ ಗ್ರಾಮದಲ್ಲಿ ನಡೆದಿದೆ.

ಖಡಕಲಾಟ್ ಗ್ರಾಮದ ಗೈಬಿಸಾಬ್ ಉರುಸ್ ಹಿನ್ನೆಲೆಯಲ್ಲಿ ಉರುಸ್ ಕಮೀಟಿಯಿಂದ ಕುದುರೆ ಓಟದ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ದುರ್ಘಟನೆಯೊಮದು ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.

ಸ್ಪರ್ಧೆ ಸಂದರ್ಭದಲ್ಲಿ ಬಂಡಿ ಸಮೇತ ಕುದುರೆ ಏಕಾಏಕಿ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ ಮೂವರ ಮೇಲೆ ಹಾಯ್ದು ಹೋಗಿದೆ. ಬಳಿಕ ಹಿಂದೆ ಇದ್ದ ಇನ್ನೊಂದು ಬಂಡಿಯಲ್ಲಿದ್ದ ಕುದರೆಗಳು ಕೂಡ ಕೆಳಗೆ ಬಿದ್ದವರ ಮೇಲೆ ಹಾಯ್ದಿವೆ. ಪರಿಣಾಮ ಇಬ್ಬರು ಯುವಕರು ಹಾಗೂ ಓರ್ವ ವೃದ್ಧ ಗಾಯಗೊಂಡಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅದೃಷ್ಟಾವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಯುವಕರ ಮೇಲೆ ಕುದುರೆ ಹಾಯ್ದ ವೀಡಿಯೋ ವೈರಲ್ ಆಗಿದೆ. ಖಡಕಲಾಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Comments

Popular posts from this blog

ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ- ಜಗತ್ತಿನ ಟಾಪ್‌ 50ರಲ್ಲಿ ಭಾರತದ 35 ನಗರಗಳು

37 ವರ್ಷಗಳಲ್ಲೇ ಇದೇ ಮೊದಲು: ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ 'ಯೋಗಿ ಸರ್ಕಾರ'!!

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಮನವಿ.